ಪುತ್ತೂರು (ನ.06): ಸೇವಾಭಾರತಿ -ಸೇವಾಧಾಮದ ವತಿಯಿಂದ ಪುತ್ತೂರು ತಾಲೂಕು ಪಂಚಾಯತ್ ನ ವಿ ಆರ್. ಡಬ್ಲ್ಯೂ ಸದಸ್ಯರಿಗೆ ಕಾರ್ಯಾಗಾರವನ್ನು ಪುತ್ತೂರು ತಾಲೂಕು ಪಂಚಾಯತ್ ನಲ್ಲಿ ನವೆಂಬರ್ 06 ರಂದು ಆಯೋಜಿಸಲಾಯಿತು.
ಸೇವಾಭಾರತಿಯ ಹಿರಿಯ ಕ್ಷೇತ್ರ ಸಂಯೋಜಕರಾದ ಮನು ಆರ್. ಇವರು ಬೆನ್ನುಹುರಿ ಅಪಘಾತದ ಕಾರಣ, ಪರಿಣಾಮಗಳು ಹಾಗೂ ಮೋಹನ್ ಕೆ ಅರಿಯಡ್ಕ ಇವರು ದ್ವಿತೀಯಾಂತರ ಸಮಸ್ಯೆಯ ಬಗ್ಗೆ ಮಾಹಿತಿ ನೀಡಿದರು.
ಒಟ್ಟು 26 ಮಂದಿ ಜಾಗೃತಿ ಕಾರ್ಯಾಗಾರದಲ್ಲಿ ಭಾಗವಹಿಸಿದದ್ದರು.
