ಉಡುಪಿ ಎಂ. ಜಿ.ಎಂ ಕಾಲೇಜಿನಲ್ಲಿ ಬೆನ್ನುಹುರಿ ಅಪಘಾತದ ಬಗ್ಗೆ ಜಾಗೃತಿ ಕಾರ್ಯಾಗಾರ

15.11.23 03:26 AM By sewabharathikanyadi

ಉಡುಪಿ ( ಜು.21): ಸೇವಾಭಾರತಿ -ಸೇವಾಧಾಮದ ವತಿಯಿಂದ ಉಡುಪಿ ಕುಂಜಿಬೆಟ್ಟು ಎಂ. ಜಿ.ಎಂ  ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರವನ್ನು  ಜುಲೈ 21 ರಂದು ಆಯೋಜಿಸಲಾಯಿತು.

ಸೇವಾಭಾರತಿಯ ಹಿರಿಯ ಕ್ಷೇತ್ರ ಸಂಯೋಜಕರಾದ ಮನು ಆರ್. ಇವರು  ಬೆನ್ನುಹುರಿ ಅಪಘಾತ, ಅದರ ನಿರ್ವಹಣಾ ಕ್ರಮ ಹಾಗೂ ದ್ವಿತೀಯಾಂತರ ಸಮಸ್ಯೆಯ ಬಗ್ಗೆ  ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಮಾಲತಿ ದೇವಿ, ಅಧ್ಯಾಪಕರು ಶ್ರೀಮತಿ ಕಲ್ಪನಾ ,ಸೇವಾಭಾರತಿಯ ಕ್ಷೇತ್ರ ಸಂಯೋಜಕರು ಶ್ರೀ ಶಶಾಂತ್ ಉಪಸ್ಥಿತರಿದ್ದರು.

ಒಟ್ಟು 90 ಮಂದಿ  ವಿದ್ಯಾರ್ಥಿಗಳು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದದ್ದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಮಾಲತಿ ದೇವಿ ಕಾರ್ಯಕ್ರಮಕ್ಕೆ ಸ್ವಾಗತಿಸಿದರು.

sewabharathikanyadi