ಉಡುಪಿ( ಜು.20): ಸೇವಾಭಾರತಿ -ಸೇವಾಧಾಮದ ವತಿಯಿಂದ ಉಡುಪಿ ಮೂಡುಪೆರಂಪಳ್ಳಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರವನ್ನು ಜುಲೈ 20 ರಂದು ಆಯೋಜಿಸಲಾಯಿತು.
ಸೇವಾಭಾರತಿಯ ಹಿರಿಯ ಕ್ಷೇತ್ರ ಸಂಯೋಜಕರಾದ ಮನು ಆರ್. ಇವರು ಬೆನ್ನುಹುರಿ ಅಪಘಾತ, ಅದರ ನಿರ್ವಹಣಾ ಕ್ರಮ ಹಾಗೂ ದ್ವಿತೀಯಾಂತರ ಸಮಸ್ಯೆಯ ಬಗ್ಗೆ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಶ್ರೀನಾಥ್ ನಾಯಕ್,ಕಾಲೇಜು ಪ್ರಧ್ಯಾಪಕರಾದ ಶ್ರೀ ಗೋಪಾಲ್, ಶ್ರೀಮತಿ ಲಾವಣ್ಯ, ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾದ ಶ್ರೀ ಶಂಕರ್, ಶ್ರೀಮತಿ ಅಮಿತಾ, ಕಾಲೇಜಿನ ವಿಭಾಗ ಮುಖ್ಯಸ್ಥರಾದ ಶ್ರೀಮತಿ ಶುಭಲತಾ, ಶ್ರೀಮತಿ ಕೃತಿಕಾ, ಶ್ರೀಮತಿ ಸ್ವಪ್ನ, ಶ್ರೀ ಶರತ್, ಸೇವಾಭಾರತಿಯ ಕ್ಷೇತ್ರ ಸಂಯೋಜಕರು ಶ್ರೀ ಶಶಾಂತ್ ಉಪಸ್ಥಿತರಿದ್ದರು.
ಒಟ್ಟು 61 ಮಂದಿ ವಿದ್ಯಾರ್ಥಿಗಳು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದದ್ದರು.
