ವೇಣೂರು(ಆ.23): ನವಚೇತನ ಚಾರಿಟೇಬಲ್ ಟ್ರಸ್ಟ್ ರಾಮನಗರ ಮತ್ತು ಸೇವಾಭಾರತಿ ಕನ್ಯಾಡಿ ಇವರ ವತಿಯಿಂದ ಉಂಬೆಟ್ಟು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ಆಗಸ್ಟ್ 23 ರಂದು ನಡೆಯಿತು.
ಕಾರ್ಯಕ್ರಮದಲ್ಲಿ ನವಚೇತನ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಕೆ. ಎಸ್. ಮಂಜುನಾಥ ಮತ್ತು ಸೇವಾಭಾರತಿ ಅಧ್ಯಕ್ಷರಾದ ವಿನಾಯಕ ರಾವ್ ಕನ್ಯಾಡಿ, ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಪಿ. ಯಸ್., ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಧನಂಜಯ ಜೈನ್, ಉಪಾಧ್ಯಕ್ಷೆ ಚೇತನ ಭಾಲಭಾರತಿ ಶಿಕ್ಷಕಿ ಮಮತ, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
