ಸೇವಾಭಾರತಿ: ಸಂಪನ್ನಗೊಂಡ ಉಚಿತ 7 ದಿನಗಳ ಯೋಗ ಶಿಬಿರ

15.11.23 03:01 PM By sewabharathikanyadi

ಕನ್ಯಾಡಿ (ಜೂ.29) : ಸೇವಾಭಾರತಿ ಕನ್ಯಾಡಿ ಹಾಗೂ ಕನ್ಯಾಡಿಯ ಶ್ರೀ ದುರ್ಗಾ ಮಾತೃ ಮಂಡಳಿಗಳ ಸಹಯೋಗದಲ್ಲಿ ನಡೆದ ಉಚಿತ ಯೋಗ ಶಿಬಿರದ  ಸಮಾರೋಪ ಸಮಾರಂಭವು ಜೂನ್ 29 ರಂದು ಕನ್ಯಾಡಿಯ ಸೇವಾನಿಕೇತನ ಕಾರ್ಯಾಲಯದಲ್ಲಿ ಜರುಗಿತು.


ಕಾರ್ಯಕ್ರಮದಲ್ಲಿ ಯೋಗ ತರಬೇತುದಾರರಾದ ಕು. ಭಾಷಿಣಿ ಯೋಗಾಭ್ಯಾಸದ ಉದ್ದೇಶ ಹಾಗೂ ಅಗತ್ಯತೆಗಳನ್ನು ಸಂಕ್ಷಿಪ್ತವಾಗಿ ತಿಳಿಸಿ, 'ತಾನು ನಡೆಸಿದ ಶಿಬಿರಗಳಲ್ಲಿ ಇದೊಂದು ಅತ್ಯುತ್ತಮ ಅನುಭವ ನೀಡಿದ ಶಿಬಿರವಾಗಿದ್ದು  ಇದಕ್ಕೆ ಅವಕಾಶ ಕೊಟ್ಟ ಸೇವಾಭಾರತಿ ಅಧ್ಯಕ್ಷೆ ಶ್ರೀಮತಿ ಸ್ವರ್ಣಗೌರಿ ಅವರಿಗೆ ಕೃತಜ್ಞತೆಯನ್ನು ತಿಳಿಸಿದರು'. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಶ್ರೀ ದುರ್ಗಾ ಮಾತೃ ಮಂಡಳಿಯ ಅಧ್ಯಕ್ಷರು ಶ್ರೀಮತಿ ಶಾಂತ ಪಿ ಶೆಟ್ಟಿ  ಯೋಗ ಅಭ್ಯಾಸದ ಮಹತ್ವವನ್ನು ತಿಳಿಸಿದರು. ಸೇವಾಭಾರತಿಯ ಅಧ್ಯಕ್ಷರಾದ ಶ್ರೀಮತಿ ಸ್ವರ್ಣಗೌರಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಶಿಬಿರಾರ್ಥಿಗಳಿಗೆ ಶುಭಹಾರೈಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ದುರ್ಗಾ ಮಾತೃ ಮಂಡಳಿಯ ಸದಸ್ಯರಾದ ಶ್ರೀಮತಿ ರವಿಜಾ ಸತೀಶ್ ರಾವ್ ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಯೋಗ ತರಬೇತುದಾರರಾದ ಕು. ಭಾಷಿಣಿಯವರನ್ನು ಸೇವಾಭಾರತಿ ಹಾಗೂ ಶ್ರೀ ದುರ್ಗಾ ಮಾತೃ ಮಂಡಳಿ ಪರವಾಗಿ ಗೌರವಿಸಲಾಯಿತು.

 ಒಟ್ಟು 15 ಮಂದಿ ಶಿಬಿರಾರ್ಥಿಗಳು ಈ ಯೋಗ ಶಿಬಿರದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಸೇವಾಭಾರತಿಯ ಡಾಕ್ಯುಮೆಂಟೇಷನ್ ಸಂಯೋಜಕಿ  ಕು.ಅಪೂರ್ವ ಪಿ.ವಿ. ನಿರೂಪಿಸಿ, ಅಕೌಂಟೆಂಟ್ ಕು. ಅಕ್ಷತ ಸ್ವಾಗತಿಸಿ, ಧನ್ಯವಾದವಿತ್ತರು

sewabharathikanyadi